ಭಾನುವಾರ, ನವೆಂಬರ್ 15, 2009

ಪ್ರಭಾತ್ ಕಲಾವಿದರು

ಹೆಸರೆ ಹೇಳುವಂತೆ ಬೆಳಗುವ ಕಲಾವಿದರೇ ಸರಿ....... ಕನ್ನಡ ಕಲೆಯನ್ನು ನಾಡಿನಾದ್ಯಂತ ಪಸರಿಸುತ್ತಿರುವ ಕಲಾವೃಂದಕ್ಕೆ ನಮ್ಮನಮನಗಳು ಇತ್ತೀಚೆಗಷ್ಟೆ ಕುವೈಟಿಗೆ ಆಗಮಿಸಿದ್ದ ಕಲಾವಿದರ ಬಗ್ಗೆ ನನಗೆ ಹೆಚ್ಚು ತಿಳಿದುಕೊಳ್ಳಬೇಕೆಂದು ಬಯಸಿ ಅಂತರ್ಜಾಲಕ್ಕೆ ಮೊರೆಹೋದೆ ಅಲ್ಲಿ ನಿಜಕ್ಕೊ ಅತಿ ಹೆಚ್ಚು ಮಾಹಿತಿಯೇ ದೊರೆಯಿತು.

೧೯೩೦ರಲ್ಲಿ ಪ್ರಾರಂಭಗೊಂಡ ಒಂದು ಕಲಾವೃಂದ ಹಲವು ನಾಟಕ, ನೃತ್ಯರೂಪಕಗಳಿಗೆ ಹೆಸರುವಾಸಿಯಾಗಿದ್ದರು. ಈ ಕಲಾವೃಂದವನ್ನು ಗೋಪಿನಾಥ್,ಕರಿಗಿರಿ,ಜೈಸಿಂಹ,ದ್ವಾರಕನಾಥ್ ಎಂಬ ಕಲಾತಪಸ್ವಿಗಳು ತಮ್ಮ ಕಲಾವೃಂದಕ್ಕೆ ಗುರುರಾಜ ವಾದ್ಯವೃಂದ ಮತ್ತು ನಾಟಕ ಮಂಡಳಿ ಎಂಬ ಹೆಸರನ್ನಿಟ್ಟರು. ಇವರು ನಾಟಕ ನೃತ್ಯ, ಹಾಡುಗಳು ಹಾಗೂ ಹರಿಕಥಾ ವಿಶೇಷತೆಗಳಲ್ಲೂ ಹೆಚ್ಚು ಒಲವಿತ್ತರು.ಮೊದಲು ತುಮಕೂರಿನಲ್ಲಿ ನೆಲೆಗೊಂಡಿದ್ದ ಕಲಾವಿದರು ಹೆಚ್ಚು ಪ್ರೇಕ್ಷಕರನ್ನು ಮನಸೆಳೆಯಲು ಬೆಂಗಳೂರಿಗೆ ಬಂದು ನೆಲೆಸಿದರು ಈ ತಂಡದ ಮೇಲ್ವಿಚಾರಕರಾಗಿ ಗೋಪಿನಾಥ್ ರವರು ತಮ್ಮ ತಂಡವನ್ನು ಮುನ್ನಡೆಸಿದರು. ೧೯೪೨ರಲ್ಲಿ ಪ್ರಭಾತ್ ಕಲಾವಿದರೆಂಬ ಹೆಸರಿಂದ ಮರುನಾಮಕರಣ ಮಾಡಿದರು. ಮೊಟ್ಟ ಮೊದಲು ಭಾರತೀಯ ಸಾಂಸ್ಕೃತಿಕ ನೃತ್ಯವನ್ನು ತಮ್ಮ ನಾಟಕಗಳಲ್ಲಿ ಅಳವಡಿಸಿದ ಹೆಗ್ಗಳಿಕೆಯೊ ಈ ಕಲಾವಿದರ ಪಾಲಾಗುತ್ತದೆ.

ಚಲನಚಿತ್ರ ಅಭಿನೇತ್ರಿಗಳಾದ ಸಿ.ಆರ್.ಸಿಂಹ, ಶ್ರೀನಾಥ್, ಮಂಜುಳ, ಲೋಕೇಶ್ ತಮ್ಮ ಕಲಾ ಜೀವನವನ್ನು ಪ್ರಾರಂಭಿಸಿದ್ದು ಇದೇ ಕಲಾವಿದರ ತಂಡದಿಂದ, ಇವರೆಲ್ಲ ಚಿತ್ರರಂಗದ ಹಾದಿಯಲ್ಲಿ ಬಹಳಷ್ಟು ಹೆಸರು ಮಾಡಿದ್ದಾರೆ. ಪ್ರಭಾತ್ ಕಲಾವಿದರು ತಮ್ಮ ನಾಟಕಗಳಲ್ಲಿ ಸುಮಾರು ೨೦ ನಾಟಕಗಳನ್ನು ಸಾದರಪಡಿಸಿದ್ದಾರೆ ಅವುಗಳಲ್ಲಿ ಕೆಲವು ಮೋಹಿನಿ ಬ್ರಹ್ಮಾಸುರ, ಕರ್ನಾಟಕ ವೈಭವ, ಕಿಂದರಿಜೋಗಿ,ರಾಮ ಪ್ರತಿಕ್ಷಾ,ಪುಣ್ಯಕೋಟಿ, ಧರ್ಮಭೊಮಿ, ದಶಾವತಾರ ಮುಂತಾದವುಗಳು. ಇಂತಹ ನೃತ್ಯರೂಪಕ ನಾಟಕ ಪ್ರಸ್ತುತ ಪಡಿಸುವುದು ಅತಿ ಸುಲಭದ ಮಾತಲ್ಲ ಅದಕ್ಕೆ ತಕ್ಕಂತ ವೇದಿಕೆ, ದೀಪಾಲಂಕಾರಗಳ ಪ್ರಭಾವ, ಹಿನ್ನೆಲೆ ಧ್ವನಿಗೆ ತಮ್ಮ ಮಾತು ಹೊಂದಾಣಿಕೆ, ಇವೆಲ್ಲವೂ ಬಲು ಕಷ್ಟದ ಕೆಲಸ ಅದಕ್ಕೆ ತಕ್ಕಂತ ಕಲಾವಿದರು ತಮ್ಮ ಶ್ರದ್ಧೆ ಒಲವೂ ಎಲ್ಲವನ್ನು ವಹಿಸಬೇಕಾಗುತ್ತದೆ. ಇಂತಹ ನೃತ್ಯರೂಪಕಗಳಿಗೆ ಸಾಹಿತ್ಯ,ಸಂಗೀತ ಜೋಡಣೆಗೆಂದೆ ಸಂಗೀತಸಾಹಿತ್ಯ ನಿರ್ಮಾಣಶಾಲೆಯನ್ನು ಪ್ರಭಾತ್ ಕಲಾವಿದರು ಹೊಂದಿದ್ದಾರೆ.ಇದೇ ಕಲಾವಿದರ ಅತಿ ಪ್ರಸಿದ್ಧ ನಾಟಕ ಸಿಂಡ್ರೆಲಾ ಈ ನಾಟಕವು ಸುಮಾರು ೧,೦೦೦ ಕ್ಕೊ ಹೆಚ್ಚು ಪ್ರದರ್ಶನಗೊಂಡಿರುವುದು ಅವರ ಕಲಾ ಪ್ರಬುದ್ಧತೆಯನ್ನು ಹಿಡಿದು ತೋರಿಸುತ್ತದೆ.

ಬರಿ ನಾಟಕ ನೃತ್ಯ ಇಷ್ಟಕ್ಕೆ ಮೀಸಲಿಡದೆ ತಮ್ಮ ವೃತ್ತಿಯನ್ನು ಉಡುಗೆ ತೊಡಿಗೆಗಳ ಬಾಡಿಗೆ ನೀಡುವಿಕೆ, ಸಂಗೀತ ಸಾಮಾಗ್ರಿಗಳು, ವೇದಿಕೆಗೆ ಬಳಸುವ ಸಾಮಗ್ರಿಗಳನ್ನು ಬಾಡಿಗೆಗೆ ನೀಡುತ್ತಲಿದ್ದಾರೆ, ನೃತ್ಯ ತರಬೇತಿಯನ್ನು ಸಹಾ ಹಲವು ಮಕ್ಕಳಿಗೆ ನೀಡುತ್ತಲಿದ್ದಾರೆ.

ಮತ್ತೊಂದು ವಿಶೇಷತೆ ಈ ಕಲಾಕುಟುಂಬದಲ್ಲಿದೆ ಅದೇನಂದರೆ ಅಮೇರಿಕಾ ಅಮೇರಿಕಾ ಖ್ಯಾತಿಯ ತಾರೆ ಹೇಮ ಪಂಚಮುಖಿ, ಹಾಗು ಚಲನಚಿತ್ರ ಹಾಗೂ ಕಿರುತೆರೆಯಲ್ಲಿ ಹೆಸರು ಮಾಡಿರುವ ಹರೀಶ್ ರವರು ಈ ಸಂಸ್ಥೆ ಸ್ಥಾಪಕರೊಬ್ಬರಾದ ಗೋಪಿನಾಥ್ ಅವರ ಮೊಮ್ಮಕ್ಕಳು ಇವರ ಸಾಧನೆಯೂ ಸಹ ಶ್ಲಾಂಘನೀಯ ಹೇಮರವರು ಹಲವು ಮಕ್ಕಳಿಗೆ ನೃತ್ಯ ತರಬೇತಿದಾರರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಲಿದ್ದಾರೆ ಮತ್ತು ಹರೀಶ್ ಹಾಗೂ ಅವರ ಪತ್ನಿ ಕಿರುತೆರೆ ಅತಿ ಮುಗ್ಥ, ಸೌಮ್ಯ ಸ್ವರೂಪಿ ದೀಪಶ್ರೀ ದಂಪತಿಗಳಿಬ್ಬರು ಈ ಪ್ರಭಾತ್ ಕಲಾವಿದರ ಬಳಗಕ್ಕೆ ಹೆಮ್ಮೆಯ ಗರಿಗಳಾಗಿದ್ದಾರೆ.

ತಮ್ಮ ಕುಟುಂಬವನ್ನೇ ಕಲಾವಂತಿಕೆಯಲ್ಲಿ ಮುಳುಗಿಸಿಕೊಂಡ ಈ ಮನೋಘ್ನ ಅಭಿನೇತ್ರಿಗಳೂಂದಿಗೆ ನಾವುಗಳು ಕಳೆದ ಸಮಯ ನಮ್ಮ ಜೀವನದ ಅತಿ ಸಂತಸದ ಸಮಯ ಹಾಗೂ ಅವರ ತರಬೇತಿ ಮೇರೆಗೆ ನಾವು ಕಲಿತ ಕಿಂದರಜೋಗಿ ನಾಟಕದ ಪುಟ್ಟ ಪಾತ್ರ ನಮಗೆ ಖುಷಿಕೊಟ್ಟಿದೆ. ಇನ್ನು ಉತ್ತಮವಾಗಿ ಮಾಡಬೇಕಿತ್ತೆಂಬ ಅಭಿಲಾಷೆಯು ಇದೆ.
ಒಂದು ವಾರ ದೀಪಶ್ರೀ ಹಾಗೂ ಹರೀಶ್ ಅವರೊಂದಿಗೆ ಕಳೆದ ದಿನಗಳು ನಿಜಕ್ಕೊ ಸಂತಸ ತರಿಸಿದೆ. ನಿಮ್ಮಿಬ್ಬರ ಶ್ರಮದಿಂದ ನಮ್ಮೆಲ್ಲರ ಪಾತ್ರಕ್ಕೆ ಕಳೆತರಿಸಿದೆಂದೇಳಿದರೆ ತಪ್ಪಾಗಲಾರದು.

ಹರೀಶ್ ಅವರು ನೀಡಿದ ರಾಮ,ವಿಷ್ಣು,ಕಿಂದರಜೋಗಿ ಮುಂತಾದವು..ಎಲ್ಲ ಪಾತ್ರಗಳನ್ನು ನಾವು ಕಣ್ಣಾರೆ ಕಂಡೆವು ಈ ಪಾತ್ರಗಳಿಗೆ ಕಿಂಚ್ಚಿತ್ತೂ ಕುತ್ತು ಬರದಹಾಗೆ ಆಯಾ ಪಾತ್ರಕ್ಕೆ ಕಳೆತುಂಬಿದ್ದರು.ಇನ್ನು ದೀಪಶ್ರೀರವರು ಪುಣ್ಯಕೋಟಿ ಪಾತ್ರದಲ್ಲಿ ತಾವೇ ಆ ಪುಣ್ಯಕೋಟಿಯೇನೋ ಎಂಬಂತೆ ಆ ಪಾತ್ರದಲ್ಲೇ ಐಕ್ಯರಾಗಿಬಿಟ್ಟಿದ್ದರು...ಅವರು ತಬ್ಬಲಿಕರುವಿನ ತಬ್ಬಿ ಮುದ್ದಾಡಿ ಇತರ ಹಸುಗಳಿಗೆ ಕಂದಮ್ಮನನ್ನು ನೀಡುವಾಗಿನ ದೃಶ್ಯ ಇಂದಿಗೂ ಕಣ್ಣುಕಟ್ಟಿದಂತಿದೆ...ಎಷ್ಟೋ ಮಂದಿ ಪ್ರೇಕ್ಷಕರು ತಾಯಿ ಮಗು ಅಗಲಿಕೆಗಾಗಿ ನೊಂದು ಕಣ್ಣೀರ ಸುರಿಸಿದ್ದು ಉಂಟು ಅಷ್ಟು ಮನೋಘ್ನ ಅಭಿನಯ ದೀಪಶ್ರೀರವರದು.ಇವರಿಬ್ಬರಷ್ಟೆ ಅಲ್ಲ ಅವರೊಂದಿಗೆ ಪಾತ್ರ ನಿರ್ವಹಿಸಿದ್ದ ಕಿಂದರಿಜೋಗಿಯ ಗೌಡ ಹಾಗೂ ಅಲೆಗ್ಸಾಂಡರ್ ಪಾತ್ರದಾರಿ, ಲಕ್ಷ್ಮಣ,ಜಟಾಯು,ಹುಲಿ, ಕೃಷ್ಣ, ಹಲವು ನೃತ್ಯ ಕಲಾವಿದರೂ ಎಲ್ಲರೂ ಅದೇನು ಅಭಿನಯ ಒಬ್ಬೂಬ್ಬ ಕಲಾವಿದರೂ ೩,೪ ಪಾತ್ರಧಾರಿಗಳಾಗಿ ತಮ್ಮ ತಮ್ಮ ಪಾತ್ರಕ್ಕೆ ಜೀವಕಳೆ ತುಂಬಿದರು.

ಹರೀಶ್, ದೀಪ ಹಾಗೂ ಎಲ್ಲಾ ಪಾತ್ರ ವೃಂದದವರಿಗೆ ನಮ್ಮ ನಮನಗಳು

3 ಕಾಮೆಂಟ್‌ಗಳು:

  1. tumba chennagi tiLisideeri, bangalore nalli ivara naatakagaLu tumba nodiddEne.

    ಪ್ರತ್ಯುತ್ತರಅಳಿಸಿ
  2. ತುಂಬಾ ಒಳ್ಳೆಯ ಮಾಹಿತಿ ಈ ಪ್ರಬುದ್ಧ ಕಲಾವಿದರ ಬಗ್ಗೆ ಕೊಟ್ಟಿದ್ದೀರಿ, ನಗಿಸೋ-ಮನಸಿನ ಸುಗುಣೆಯವರೇ...
    ಇದನ್ನ ನಿಮ್ಮ ಮುಖ್ಯವಾಹಿನಿಯಲ್ಲಿ ಹರಿಯಬಿಟ್ಟಿದ್ದರೆ ಅಲವಾರು ನಮ್ಮ ಬ್ಲಾಗು-ಸಖರಿಗೆ ಸುಖವೆನಿಸುತ್ತಿತ್ತು...ಈಗ್ಲೂ ಮಾದಬಹುದು ಬಹುಶಃ ಇನ್ನಷ್ಟು ಮಾಹಿತಿ ಹಾಕಿ..

    ಪ್ರತ್ಯುತ್ತರಅಳಿಸಿ